ರುದ್ರಾ ವೀರಭದ್ರ ಅದ್ರಿನಂದನೆ ರಮಣಾ
Category: ಶ್ರೀಶಿವ
Author: ವಿಜಯದಾಸ
ರುದ್ರಾ ವೀರಭದ್ರ ಅದ್ರಿನಂದನೆ ರಮಣಾ
ರೌದ್ರ ಮೂರುತಿ ದಯಾಸಮುದ್ರ ಎನ್ನನು ಕಾಣೊ
ಮುಪ್ಪುರವ ಗೆದ್ದ ಮುಕ್ಕಣ್ಣ ಮನ್ಮಥ ವೈರಿ
ಸರ್ಪಭೂಷಣ ಮೃತ್ಯು ನಿವಾರಣ
ಕಪ್ಪುಗೊರಳ ಕೃತ್ತಿವಾಸ ವ್ಯೋಮಕೇಶ
ಒಪ್ಪಿಕೊಳ್ಳಬೇಕು ಒಲಿದು ಈ ವಾಕು ||1||
ಸದ್ಯೋಜಾತ ಭೂತನಾಥ ಭಕುತರದಾತ
ಖದ್ಯೋತ ಲಾವಣ್ಯ ಸುರಜ್ಯೇಷ್ಠನ
ಮಧ್ಯವಾಸನ ಛೇದ ಶ್ರೀ ವಿಷ್ಣುವಿನ ಪಾದ
ಹೃದ್ಯದೊಳಗಿಟ್ಟ ಜಟಾ ಜೂಟ ಬಲು ಧಿಟ್ಟ||2||
ಮನೋನಿಯಾಮಕ ಗುರುವೆ ದೈನ್ಯದಿಂದಲಿ ಕರೆವೆ
ಜನಿಸಿ ಕಾಡುವ ರೋಗ ಕಳೆಯೊ ಬೇಗ
ಅನುಪಮ ವಿಜಯವಿಠ್ಠಲನ ನಾಮಾಮೃತವ
ಎನಗುಣಿಸುವುದೋ ಸಾಂಬು ಮರುತ ಪ್ರತಿಬಿಂಬ ||3||