ಶ್ರೀನಿವಾಸನ ಕ್ಷೇತ್ರ ಎಂಥಾದೊ

Category: ಶ್ರೀಕೃಷ್ಣ

Author: ವಿಜಯದಾಸ

ಶ್ರೀನಿವಾಸನ ಕ್ಷೇತ್ರ ಎಂಥಾದೊ
ಮಾನಿಸರಿಗೊಶವಲ್ಲ ಪೊಗಳಿ ಪೇಳುವುದು
ಮೇಧಾದಿ ಮುನಿ ತನ್ನ ತಪೋಸಿದ್ಧಿಗೆ ಸರ್ವ |
ಮೇದಿನಿ ತಿರುಗಿ ಬರುತಲಿ ಇತ್ತಲು |
ಸಾಧನಕೆ ಸೌಮ್ಯವಾದ ಭೂಮಿಯನು ನೋಡಿ ಇವ |
ಮಾಧವನ ಒಲಿಸಿದನು ಮಣಿ ಮುಕ್ತಿ ತೀರದಲಿ||1||

ನೆಸಗಿದ ತಪಕೆ ಮೆಚ್ಚಿ ಹರಿ ಒಲಿದ ತೀವ್ರದಲಿ |
ಬಿಸಿಜದಳ ಲೋಚನೆ ಲಕುಮಿಯಿಲ್ಲೀ ||
ಎಸೆವ ಮಂಜರಿ ವೃಕ್ಷದಲಿ ವಾಸವಾಗಿ |
ವಸುಧಿಯೊಳು ವಾಸವಾಗಿ ಅಗ್ರದಲಿ ಮೆರೆದನು ||2||

ಪರಮೇಷ್ಠಿ ಬಂದು ಈ ಕ್ಷೇತ್ರದಲಿ ನಿಂದು ಚ
ತುರ ಮೂರ್ತಿಗಳ ಭಜಿಸಿ ವರ ಪಡೆದ
ಧರೆಯೊಳಗೆ ಆವನಾದರೆ ಬರಲು ನೀನೊಲಿದು
ಪರಮ ಗತಿ ಕೊಡು ಎಂದು ಸ್ತುತಿಸಿದನು ಹರಿಯ||3||

ಇಲ್ಲಿಗೆ ಬಂದು ಸತ್ಕರ್ಮವನು ಮಾಡಿದಡೆ |
ಎಲ್ಲ ಕ್ಷೇತ್ರದಲಿ ಮಾಡಿದ ಫಲಕಿಂತ |
ಎಳ್ಳಿನಿತು ಮಿಗಿಲೆನಿಸಿ ಪುಣ್ಯ ತಂ | ದುಣಿಸುವುದು |
ಎಲ್ಲೆಲ್ಲಿ ಇದ್ದರು ಸ್ಮರಣೆ ಮಾಡಿರೊ ಜನರು ||4||

ಸುಗಂಧ ಪರ್ವತವಾಸ ಪುರುಷೋತ್ತಮ |
ನಿಗಮಾದಿಗಳಿಗೆ ಅತಿದೂರತರನೋ |
ಸುಗುಣನಿಧಿ ವಿಜಯವಿಠ್ಠಲರೇಯ ಸರ್ವದ |
ಗಗನದಲಿ ಪೊಳೆವನು ಬ್ರಹ್ಮಾದಿಗಳ ಸಹಿತಾ ||5||