ಅರಿವು ಸಾಧ್ಯವಾಯಿತ್ತೆಂದು,

Category: ವಚನಗಳು

Author: ಅಕ್ಕಮಹಾದೇವಿ

ಅರಿವು ಸಾಧ್ಯವಾಯಿತ್ತೆಂದು,
ಗುರುಲಿಂಗಜಂಗಮವ ಬಿಡಬಹುದೆ ?

ಸಂದು ಸಂಶಯವಳಿದು ಅಖಂಡ ಜ್ಞಾನವಾಯಿತ್ತೆಂದು
ಪರಧನ ಪರಸ್ತ್ರೀಯರುಗಳಿಗೆ ಅಳುಪಬಹುದೆ ?

'ಯತ್ರ ಜೀವಃ ತತ್ರ ಶಿವಃ' ಎಂಬ ಅಭಿನ್ನ ಜ್ಞಾನವಾಯಿತ್ತೆಂದು
ಶುನಕ ಸೂಕರ ಕುಕ್ಕುಟ ಮಾರ್ಜಾಲಂಗಳ ಕೂಡೆ ಭುಂಜಿಸಬಹುದೆ ?

ಭಾವದಲ್ಲಿ ತನ್ನ ನಿಜದ ನೆಲೆಯನರಿತಿಹುದು'
ಸುe್ಞನ ಸತ್ಕ್ರಿಯಾ ಸುನೀತಿ ಮಾರ್ಗದಲ್ಲಿ ವರ್ತಿಸುವುದು.

ಹೀಂಗಲ್ಲದೆ e್ಞನವಾಯಿತ್ತೆಂದು ತನ್ನ ಮನಕ್ಕೆ ಬಂದಹಾಂಗೆ
ಮೀರಿನುಡಿದು ನಡೆದೆನಾದಡೆಶ್ವಾನಗರ್ಭದಲ್ಲಿ ಹುಟ್ಟಿಸದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯನು ?