ಉಸುರಿನ ಪರಿಮಳವಿರಲು
Category: ವಚನಗಳು
Author: ಅಕ್ಕಮಹಾದೇವಿ
ಉಸುರಿನ ಪರಿಮಳವಿರಲು
ಕುಸುಮದ ಹಂಗೇಕಯ್ಯಾ
ಕ್ಷಮೆ ದಮೆ ಶಾಂತಿ ಸೈರಣೆಯಿರಲು
ಸಮಾಧಿಯ ಹಂಗೇಕಯ್ಯಾ
ಲೋಕವೆ ತಾನಾದ ಬಳಿಕ ಏಕಾಂತದ
ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?
Author: ಅಕ್ಕಮಹಾದೇವಿ
ಉಸುರಿನ ಪರಿಮಳವಿರಲು
ಕುಸುಮದ ಹಂಗೇಕಯ್ಯಾ
ಕ್ಷಮೆ ದಮೆ ಶಾಂತಿ ಸೈರಣೆಯಿರಲು
ಸಮಾಧಿಯ ಹಂಗೇಕಯ್ಯಾ
ಲೋಕವೆ ತಾನಾದ ಬಳಿಕ ಏಕಾಂತದ
ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?