ಕಟ್ಟಿದ ಕೆರೆಗೆ ಕೋಡಿ ಮಾಣದು.

Category: ವಚನಗಳು

Author: ಅಕ್ಕಮಹಾದೇವಿ

ಕಟ್ಟಿದ ಕೆರೆಗೆ ಕೋಡಿ ಮಾಣದು.
ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯಾ ?
ಅರುಹಿರಿಯರೆಲ್ಲ ವೃಥಾ ಕೆಟ್ಟು ಹೋದರಿನ್ನೆಂತಯ್ಯಾ ?
ಚೆನ್ನಮಲ್ಲಿಕಾರ್ಜುನದೇವರಿಗೋತು ಮುಟ್ಟಿದವರೆಲ್ಲಾ ನಿಶ್ಚಿಂತರಾದರು.