ನೀನೇ ಅನಾಥಬಂಧು ಕಾರುಣ್ಯಸಿಂಧು

Category: ಶ್ರೀಕೃಷ್ಣ

Author: ಪುರಂದರದಾಸ

ನೀನೇ ಅನಾಥಬಂಧು ಕಾರುಣ್ಯಸಿಂಧು ॥

ಪತಿಗಳೈವರಿದ್ದರೇನು
ಸತಿಯ ಭಂಗ ಬಿಡಿಸಲಿಲ್ಲ
ಗತಿ ನೀನೇ ಮುಕುಂದನೆಂದರೆ
ಅತಿ ವೇಗದಿ ಬಂದೊದಗಿದೆ ಕೃಷ್ಣಾ॥

ಶಿಲೆಯ ಮೆಟ್ಟಿ ಕುಲಕೆ ತಂದೆ
ಬಲಿಯ ಬೇಡಿ ಸತ್ಪದವಿಯನಿತ್ತೆ
ಸುಲಭದಿ ಭಜಿಸುವ ಭಕ್ತರ ಸಲಹುವ ನಮ್ಮ
ಚೆಲುವ ಪುರಂದರ ವಿಠ್ಠಲರಾಯ ॥