ಎಂದೊಡನಾಡುವೆ ಎಂದರ್ಥಿಬಡುವೆ
Category: ಶ್ರೀಕೃಷ್ಣ
Author: ವಿಜಯದಾಸ
ಎಂದೊಡನಾಡುವೆ ಎಂದರ್ಥಿಬಡುವೆ
ಎಂದಿಗೆ ತಕ್ರ್ಕೈಸಿ ಸಂತೋಷಬಡುವೆ
ಉತ್ಸವ ಮಂಟಪದೊಳಗೆ ಕುಳಿತು ಭಕ್ತ
ವತ್ಸಲನೆಂದು ನುತಿಸಿಕೊಂಬನ ಕೂಡ ||1||
ಸಕಲ ಭೂಷಿತನಾಗಿ ಅಜಹರ ಸುರಮುನಿ
ನಿಕರ ಕೈಯಿಂದ ಸ್ತುತಿಸಿಕೊಂಬನ ಕೂಡ ||2||
ಆಪೋಹಿಷ್ಠಾ ಮಯೋಭುವನೆಂಬೋ ಮಂತ್ರ
ಆ ಪುರೋಹಿತರಿಂದ ಕಲಿತುಕೊಂಬನ ಕೂಡ ||3||
ನಾಲ್ವತ್ತುಮೂರು ಪದಂಗಳು ಮಾಡೆಂದು
ಹೇಳಿದ ಹೇಮಾದ್ರಿ ಶಿಖರಾಕಾರನಕೂಡೆ ||4||
ದಂಡಿಗೆ ಕರೆದಲ್ಲಿ ಕೊಟ್ಟು ಅಮೃತದ ಕರ
ಮಂಡೆಯಲ್ಲಿಟ್ಟ ಮಹಮಹಿಮನ ಕೂಡ ||5||
ಪಲ್ಲಕ್ಕಿ ಏರಿ ಪವಳಿಯ ಸುತ್ತಿ
ಸರ್ರಗೆ ನಿಲ್ಲದೆ ಗುಡಿಪೊಕ್ಕ ನಿರ್ಮಳನ ಕೂಡ||6||
ವಾರಶನಿ ಚತುರ್ದಶಿ ಕೃಷ್ಣಪುಷ್ಯದಿ
ಈ ರೀತಿಯಲಿ ಕೂಡ ಇಂದಿರೇಶನ ಕೂಡ ||7||
ರೌದ್ರಿ ಸಂವತ್ಸರ ಅರ್ಧರಾತ್ರಿಯಲಿ
ಭದ್ರ ಮೂರುತಿಯಾದ ಭವಹರ ಕೂಡ ||8||
ಗುರುಪುರಂದರ ಉಪದೇಶನ ಬಲದಿಂದ
ಸಿರಿ ವಿಜಯವಿಠ್ಠಲನ ಚರಣ ತಕ್ರ್ಕೈಸಿ ||9||