ಕೋಪವೆ ತಾಪ ಬ್ರಹ್ಮೇತಿ

Category: ಶ್ರೀಕೃಷ್ಣ

Author: ವಿಜಯದಾಸ

ಕೋಪವೆ ತಾಪ ಬ್ರಹ್ಮೇತಿ
ಶ್ರೀ ಪುರುಷ ಬಾಲ ಅಣುರೇಣುತ್ರಿಣಗಳಿಗೆಲ್ಲ

ವಿಷ್ಣಪದೆ ಯಮುನೆ ಸರಸ್ವತಿ ಸಿಂಧು ಕಾವೇರಿ
ಕೃಷ್ಣವೇಣಿ ಗೋದೆ ತುಂಗೆ ನರ್ಮದಾ
ಇಷ್ಟು ಮಹಾನದಿಯಲ್ಲಿ ಮುಣಗಿ ಮಿಂದರೇನು
ಕಾಷ್ಟಕಭ್ಯಾಂಗವನು ಮಾಡಿ ನೀರೆರದಂತೆ||1||

ಭಕುತಿಯಲಿ ನಡೆದು ಭವಿಷೊತ್ತರ ಪೇಳಿದರೇನೊ
ವಿಕಳಮತಿಯಲಿಟ್ಟು ವರನಾದರೇನು
ಕಕುಲಾತಿ ತೊರೆದು ನಿಷ್ಕಳಂಕನಾದರೆ ಏನು
ಶುಕಪಕ್ಷಿ ಅನುಗಾಲ ಓದಿ ತಿಳಿದಂತೆ ||2||

e್ಞನದಲ್ಲಿ ಪರರಿಗೆ ನ್ಯಾಯ ಪೇಳಿದರೇನು
ಹಾನಿ ನೆನೆಸಿ ಕೀರ್ತಿಯ ಪಡೆದರೇನು
ಧ್ಯಾನದಲಿ ಮಾನಸ ಪೂಜೆ ಮಾಡಿದರೇನು
ಶ್ವಾನದಲಿ ಬೂದಿಯೊಳಗೆ ವರಗಿ ಇದ್ದಂತೆ ||3||

ಯಾತ್ರೆ ತೀರ್ಥಂಗಳು ತೊಳಲಿ ತಿರುಗಿದರೇನು
ಪಾತ್ರಾಪಾತ್ರನರಿದು ನಡೆದರೇನು
ಗಾತ್ರವನು ಬಳಲಸಿ ನೇಮ ಮಾಡಿದರೇನು
ಮೂತ್ರದಲಿ ತೊಳೆದು ಅಮೃತನ್ನ ಉಂಡಂತೆ ||4||

ವಡೆವ ಮಡಕಿಗೆ ಚಿಂತಾಮಣಿ ತಂದು ಹಚ್ಚಲು
ಗಡಿಗಿ ಅಲ್ಲದೆ ಅದು ಪರುಶಾಗೋದೆ
ಬಿಡದೆ ಕೋಪಿಷ್ಠನು ಬಲು ಶಾಂತನೆನೆಸಿದರೆ
ವೊಡಿಯ ಸಿರಿ ವಿಜಯವಿಠ್ಠಲನೊಲಿದು ಮೆಚ್ಚನಯ್ಯಾ ||5||